ADVERTISEMENT

ಕೋವಿಡ್‌ ಪರೀಕ್ಷೆ: ಮಾದರಿ ಕೊಟ್ಟವರೂ ಪ್ರತ್ಯೇಕವಾಗಿರುವುದು ಕಡ್ಡಾಯ –ಸರ್ಕಾರ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 12:41 IST
Last Updated 13 ಜುಲೈ 2020, 12:41 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕೋವಿಡ್‌ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡು ಗಂಟಲು ದ್ರವ ಪರೀಕ್ಷೆಗೆ ಕೊಟ್ಟವರು ವರದಿ ಬರುವವರೆಗೂ ಪ್ರತ್ಯೇಕವಾಗಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಸುತ್ತೋಲೆ ಹೊರಡಿಸಿದೆ.

ಕೋವಿಡ್‌ ಮಾದರಿ ಪರೀಕ್ಷೆಗೆ ಒಳಪಟ್ಟವರುಪ್ರಯೋಗಾಲಯದಿಂದ ವರದಿ ಬರುವವರೆಗೂ ಪ್ರತ್ಯೇಕವಾಗಿರುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಮಾದರಿಯನ್ನು ನೀಡಿದವರು ವರದಿ ಬರುವವರೆಗೂ ಹೊರಗಡೆ ಹೊಗುವಂತಿಲ್ಲ, ಸಮುದಾಯದಲ್ಲಿ ಸೇರುವಂತಿಲ್ಲ, ಕೆಲಸಕ್ಕೂ ಹೋಗುವಂತಿಲ್ಲ. ಒಂದು ವೇಳೆ ಬೇಜವಾಬ್ದಾರಿಯಿಂದ ನಡೆದುಕೊಂಡರೆ ಸಂಕ್ರಾಮಿಕ ರೋಗಗಳ ಕಾಯ್ದೆ ಅನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು ಸರ್ಕಾರ ಎಚ್ಚರಿಸಿದೆ.

ADVERTISEMENT

ಮಾದರಿ ಕೊಟ್ಟವರು ಹೊರಗಡೆ ತಿರುಗಾಡಿದರೆ, ಕೆಲಸಕ್ಕೆ ಹಾಜರಾದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯಗಳಿರುವುದರಿಂದ ಅವರುಪ್ರತ್ಯೇಕವಾಗಿರುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.