ADVERTISEMENT

Covid Karnataka Update: ಒಂದೇ ದಿನ ಹತ್ತು ಸಾವಿರಕ್ಕೂ ಹೆಚ್ಚು ಜನ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 14:37 IST
Last Updated 19 ಸೆಪ್ಟೆಂಬರ್ 2020, 14:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳ ಅವಧಿಯಲ್ಲಿ 8,364 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 114 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಂದೇ ದಿನ 10,815 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ 5,11,346 ಜನರಿಗೆ ಸೋಂಕು ತಗುಲಿದ್ದು, 7,922 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ ಓಟ್ಟು 4,04,841 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 98,564 ಸಕ್ರಿಯ ಪ್ರಕರಣಗಳಿದ್ದು, 822 ಮಂದಿ ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು 3,733 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 33 ಜನ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.