ADVERTISEMENT

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 5:48 IST
Last Updated 24 ಸೆಪ್ಟೆಂಬರ್ 2020, 5:48 IST
ಡಿ.ಕೆ. ಶಿವಕುಮಾರ
ಡಿ.ಕೆ. ಶಿವಕುಮಾರ   

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಅಧಿವೇಶನದಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಅವಕಾಶ ಕೊಡಲಿಲ್ಲಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಹೇಳಿದರು.

1700 ಪ್ರಶ್ನೆ ಕೇಳಿದ್ದೆವು. ಯಾವುದಕ್ಕೂ ಸರಿಯಾಗಿ ಉತ್ತರ ಇಲ್ಲ. ವಿವರವಾಗಿ ಚರ್ಚೆ ಮಾಡಲು ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ದೂರಿದರು.

ಸರ್ಕಾರದಲ್ಲಿ ಹೊಡೆದಾಟಗಳು ನಡೆಯುತ್ತಿದೆ, ಯಾರನ್ನು ಮೇಲಕ್ಕೆ ಏರಿಸಬೇಕು, ಯಾರನ್ನು ಇಳಿಸಬೇಕು ಎಂದು ನಡೆಯುತ್ತಿದೆ ಎಂದರು.

ADVERTISEMENT

ರೈತರನ್ನೇ ಮಾರುತ್ತಿದ್ದಾರೆ, ರೈತರ ಭೂಮಿ ಮಾರುತ್ತಿದ್ದಾರೆ. ಎಲ್ಲವನ್ನು ಅಂತರರಾಷ್ಟ್ರೀಯ ಕಂಪನಿಗಳಿಗೆ ಮಾರುತ್ತಿದ್ದಾರೆ ಎಂದೂ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.