ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ನ 25 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ 11ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಬೀದರ್, ಧಾರವಾಡ, ಮಂಡ್ಯ, ಬೆಳಗಾವಿ, ದಕ್ಷಿಣ ಕನ್ನಡ, ವಿಜಯಪುರ, ರಾಯಚೂರು, ಬೆಂಗಳೂರು ಗ್ರಾಮಾಂತರ,ಮೈಸೂರು, ತುಮಕೂರು,ಕೋಲಾರಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾದಿಸಿದೆ.
ಬೀದರ್ನಲ್ಲಿ ಭೀಮಾರಾಮ್ ಪಾಟಿಲ್, ಧಾರವಾಡದಲ್ಲಿ ಸಲ್ಲಿಂ ಅಹಮ್ಮದ್, ಮಂಡ್ಯದಲ್ಲಿ ಗೂಳೀಗೌಡಗೆಲುವು ಸಾಧಿಸಿದ್ದಾರೆ.
ಬಹುತೇಕಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸ್ಪರ್ಧೆ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.