ADVERTISEMENT

Covid-19 Karnataka Update: ಒಂದೇ ದಿನ 6,455 ಜನ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜೂನ್ 2021, 14:14 IST
Last Updated 23 ಜೂನ್ 2021, 14:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆ ಕಂಡು ಬಂದಿದ್ದು 24 ಗಂಟೆಗಳ ಅವಧಿಯಲ್ಲಿ 4,436 ಪ್ರಕರಣಗಳು ದೃಢಪಟ್ಟಿವೆ. ನಿನ್ನೆ ಈ ಸಂಖ್ಯೆ 3,708 ಇತ್ತು. ಇದುವರೆಗೆ ಒಟ್ಟು 26,68,705 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. ಬುಧವಾರ 123 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ 34,287ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ 2.77ಕ್ಕೆ ತಲುಪಿದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,436 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಪೀಡಿತರ ಒಟ್ಟು ಸಂಖ್ಯೆ 28.19 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 2.59ಕ್ಕೆ ತಲುಪಿದೆ.

ADVERTISEMENT

ಕೋವಿಡ್‌ ಪೀಡಿತರ ಪೈಕಿ 6,455 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 26.68 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.16 ಲಕ್ಷಕ್ಕೆ ಇಳಿದಿದೆ.

ಬೆಂಗಳೂರು ನಗರ (24), ದಕ್ಷಿಣ ಕನ್ನಡ (13) ಮತ್ತು ಮೈಸೂರು (18) ಬುಧವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ(10), ಧಾರವಾಡ(9), ದಾವಣಗೆರೆ (8), ಬೆಳಗಾವಿ(5) ಮಂದಿ ಸತ್ತಿದ್ದಾರೆ. ಇಂದು ಕೋವಿಡ್‌ನಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ 123.

ಬೆಂಗಳೂರು ನಗರದಲ್ಲಿ ಹೊಸದಾಗಿ 1008 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡದಲ್ಲಿ 538 ಹೊಸ ಪ್ರಕರಣಗಳು ಕಂಡುಬಂದಿವೆ. ಮೈಸೂರಿನಲ್ಲಿ 499, ಹಾಸನದಲ್ಲಿ 301, ಶಿವಮೊಗ್ಗದಲ್ಲಿ 219 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. 27 ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.