ADVERTISEMENT

Covid-19 Karnataka Update: 26 ಜಿಲ್ಲೆಗಳಲ್ಲಿ 200ರ ಗಡಿಯೊಳಗೆ ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 21:22 IST
Last Updated 9 ಜುಲೈ 2021, 21:22 IST
ನಗರದ ಕೆ ಸಿ ಜನರಲ್ ಆಸ್ಪತ್ರೆ ಎದುರು ಇರುವ ಸರ್ಕಾರಿ ಮಾದರಿ ಪ್ರಾರ್ಥಮಿಕ ಶಾಲೆ ಅವರಣದಲ್ಲಿ ನೀಡುವ ಕೋವಿಡ್ ಲಸಿಕೆಗಾಗಿ ಶಾಲೆಯ ಮುಂದೆ ಇರುವ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ಬೆಳಂಬೆಳಗ್ಗೆ ಸಾಲಿನಲ್ಲಿ ಸಾರ್ವಜನಿಕರು ಕಾಯುತ್ತಿರುವ ದೃಶ್ಯ
ನಗರದ ಕೆ ಸಿ ಜನರಲ್ ಆಸ್ಪತ್ರೆ ಎದುರು ಇರುವ ಸರ್ಕಾರಿ ಮಾದರಿ ಪ್ರಾರ್ಥಮಿಕ ಶಾಲೆ ಅವರಣದಲ್ಲಿ ನೀಡುವ ಕೋವಿಡ್ ಲಸಿಕೆಗಾಗಿ ಶಾಲೆಯ ಮುಂದೆ ಇರುವ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ಬೆಳಂಬೆಳಗ್ಗೆ ಸಾಲಿನಲ್ಲಿ ಸಾರ್ವಜನಿಕರು ಕಾಯುತ್ತಿರುವ ದೃಶ್ಯ   

ಬೆಂಗಳೂರು: ರಾಜ್ಯದಲ್ಲಿ 2,290 ಮಂದಿ ಕೋವಿಡ್ ಪೀಡಿತರಾಗಿರುವುದು ಶುಕ್ರವಾರ ದೃಢಪಟ್ಟಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 28.67 ಲಕ್ಷ ದಾಟಿದೆ.

ಒಂದು ದಿನದ ಅವಧಿಯಲ್ಲಿ 1.53 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.48ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 472, ಹಾಸನದಲ್ಲಿ 228, ಮೈಸೂರಿನಲ್ಲಿ 216 ಸೋಂಕು ಪೀಡಿತರಾಗಿದ್ದಾರೆ. 26 ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 200ರ ಗಡಿಯಲ್ಲಿವೆ. 15 ಜಿಲ್ಲೆಗಳಲ್ಲಿ ಎರಡಂಕಿ ಹಾಗೂ 6 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ.

ಹೊಸದಾಗಿ 3,045 ಮಂದಿ ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 27.93 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, 37,906 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ಸೋಂಕಿತರಲ್ಲಿ 68 ಮಂದಿ ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 2.96 ರಷ್ಟು ವರದಿಯಾಗಿದೆ. ರಾಜ್ಯದ 21 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ಖಚಿತಪಟ್ಟಿವೆ. ಬೆಂಗಳೂರಿನಲ್ಲಿ 12, ದಕ್ಷಿಣ ಕನ್ನಡದಲ್ಲಿ 9, ಮೈಸೂರಿನಲ್ಲಿ 7, ಧಾರವಾಡ ಹಾಗೂ ದಾವಣಗೆರೆಯಲ್ಲಿ ತಲಾ 5 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 5ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,731ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.