ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಸಿಗದೆ ಕೋವಿಡ್ ರೋಗಿಗಳು ಸಾವಿನ ಕದ ತಟ್ಟುತ್ತಿರುವ ಮಧ್ಯೆಯೇ, ಒಡಿಶಾದ ಟಾಟಾನಗರದಿಂದ ಸೋಮವಾರ ನಸುಕಿನ 3 ಗಂಟೆಗೆ ಹೊರಟ ಒಟ್ಟು 120 ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕದ ಕಂಟೈನರ್ಗಳನ್ನು ಹೊತ್ತ ರೈಲು ಮಂಗಳವಾರ ಬೆಳಿಗ್ಗೆ ವೈಟ್ಫೀಲ್ದ್ ತಲುಪಿದೆ.
ರೈಲು ಅತ್ಯಂತ ತುರ್ತು ಆಗಿ ತಲುಪಬೇಕೆಂಬ ಉದ್ದೇಶದಿಂದ ಗ್ರೀನ್ ಕಾರಿಡಾರ್ ಕಲ್ಪಿಸಲಾಗಿತ್ತು. ತಲಾ 20 ಟನ್ನಂತೆ ದ್ರವೀಕೃತ ವೈದ್ಯಕೀಯ ಆಮ್ಲಜನಕ ತುಂಬಿದ ಆರು ಕಂಟೈನರ್ಗಳ ರೈಲು ವೈಟ್ಫೀಲ್ಡ್ನಲ್ಲಿರುವ ಇನ್ಲ್ಯಾಂಡ್ ಕಂಟೈನರ್ ಡಿಪೋ (ಐಸಿಡಿ) ತಲುಪಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್, ‘ಕೋವಿಡ್ ರೋಗಿಗಳ ಚಿಕಿತ್ಸೆಗೆ ಇದರಿಂದ ಅನುಕೂಲ ಆಗಲಿದೆ’ ಎಂದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಸಕಾಲಿಕ ನೆರವಿಗೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.