ADVERTISEMENT

ಬಾಗಲಕೋಟೆಯಲ್ಲಿ ಕೋವಿಡ್‌ಗೆ 30 ವರ್ಷದ ಯುವಕ ಬಲಿ

ಜುಲೈ 2ರಂದು ಗೋವಾದಿಂದ ಮರಳಿದ್ದನು; ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ ಏಳಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 9:45 IST
Last Updated 7 ಜುಲೈ 2020, 9:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬಾಗಲಕೋಟೆ: ಗುಳೇದಗುಡ್ಡ ತಾಲ್ಲೂಕು ಹಾನಾಪುರ (ಎಲ್‌ಟಿ) ಗ್ರಾಮದಲ್ಲಿ ಅನಾರೋಗ್ಯದಿಂದ ಜುಲೈ 5ರಂದು ಸಾವಿಗೀಡಾಗಿದ್ದ 30 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್–19ಗೆ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಗೋವಾದಿಂದ ಜುಲೈ 2ರಂದು ವಾಪಸ್ ಮರಳಿದ್ದ ಯುವಕ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಮೂರು ದಿನಗಳ ನಂತರ ಸಾವಿಗೀಡಾಗಿದ್ದನು. ಕೋವಿಡ್ ಲಕ್ಷಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಯಮಾವಳಿಗಳ ಅನ್ವಯವೇ ಅಂತ್ಯಕ್ರಿಯೆ ನಡೆಸಿತ್ತು. ಇದೀಗ ಯುವಕನ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲತಾಂಶದಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಯುವಕನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 40 ಮಂದಿಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT