ADVERTISEMENT

Covid-19 Karnataka Update: 1,189 ಹೊಸ ಪ್ರಕರಣ, ಸೋಂಕಿನಿಂದ 22 ಜನರು ಸಾವು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 13:57 IST
Last Updated 22 ಆಗಸ್ಟ್ 2021, 13:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 1,189 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾಗಿದೆ. ಆ ಪೈಕಿ 37,145 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 28,80,889 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 20556 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರು 267, ದಕ್ಷಿಣ ಕನ್ನಡ 286, ಮೈಸೂರು 79, ಹಾಸನ 75, ಚಿಕ್ಕಮಗಳೂರು 50, ಬೆಳಗಾವಿ ಜಿಲ್ಲೆಯಲ್ಲಿ 34 ಮತ್ತು ತುಮಕೂರಿನಲ್ಲಿ 39 ಹೊಸ ಪ್ರಕರಣಗಳು ಪತ್ತೆಯಾಗಿವೆ.

ADVERTISEMENT

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.94 ರಷ್ಟಿದ್ದು, ಮರಣ ಪ್ರಮಾಣ ಶೇ 1.85 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.