ADVERTISEMENT

Covid-19 Karnataka Update: ಒಂದೇ ದಿನ 8,715 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 14:14 IST
Last Updated 26 ಅಕ್ಟೋಬರ್ 2020, 14:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳ ಅವಧಿಯಲ್ಲಿ 8,715 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಸೋಮವಾರ 3,130 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 42 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,05,947ಕ್ಕೆ ಏರಿಕೆಯಾಗಿದೆ. ಆ ಪೈಕೆ 10,947 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 7,19,558 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 75,423 ಸಕ್ರಿಯ ಪ್ರಕರಣಗಳಿದ್ದು, 942 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 1,603 ಪ್ರಕರಣಗಳು ವರದಿಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಸದ್ಯ 49,224 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.