ADVERTISEMENT

Covid-19 Karnataka Update: ರಾಜ್ಯದಲ್ಲಿ 23 ಸಾವಿರ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:39 IST
Last Updated 1 ಡಿಸೆಂಬರ್ 2020, 15:39 IST
   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,330 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 14 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,82,227ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 11,792ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶೇ. 1.05 ರಷ್ಟು ಸೋಂಕಿತರು ಮೃತಪಟ್ಟಿದ್ದಾರೆ.ಇಂದು ಗುಣಮುಖರಾದ 886 ಸೋಂಕಿತರೂ ಸೇರಿದಂತೆ ರಾಜ್ಯದಲ್ಲಿ ಇದುವರೆಗೆ 8,50,707 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 23,709 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 336 ಸೋಂಕಿತರು ಐಸಿಯುನಲ್ಲಿದ್ದಾರೆ.

ಹೆಚ್ಚು ಪ್ರಕರಣಗಳು (3,70,492) ವರದಿಯಾಗಿರುವ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 758 ಜನರಿಗೆ ಸೋಂಕು ತಗುಲಿದೆ. ಇಲ್ಲಿ ಈವರೆಗೆ ಒಟ್ಟು 3,48,479 ಸೋಂಕಿತರು ಗುಣಮುಖರಾಗಿದ್ದಾರೆ. 4,146 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಉಳಿದಂತೆ ಇಂದು ಬಾಗಲಕೋಟೆಯಲ್ಲಿ 11, ಬಳ್ಳಾರಿ 07, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 38, ಬೀದರ್ 01, ಚಾಮರಾಜನಗರ 10, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 19, ಚಿತ್ರದುರ್ಗ 33, ದಕ್ಷಿಣ ಕನ್ನಡ 36, ದಾವಣಗೆರೆ 14, ಧಾರವಾಡ 10, ಗದಗ 04, ಹಾಸನ 50, ಹಾವೇರಿ 09, ಕಲಬುರಗಿ 08, ಕೊಡಗು 09, ಕೋಲಾರ 25, ಕೊಪ್ಪಳ 08, ಮಂಡ್ಯ 40, ಮೈಸೂರು 51, ರಾಯಚೂರು 17, ರಾಮನಗರ 05, ಶಿವಮೊಗ್ಗ 12, ತುಮಕೂರು 49, ಉಡುಪಿ 14, ಉತ್ತರ ಕನ್ನಡ 31, ವಿಜಯಪುರ 12 ಮತ್ತು ಯಾದಗಿರಿಯಲ್ಲಿ 10 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.