ಬೆಂಗಳೂರು: ಜೂನ್ 12ರ ಸಂಜೆ 5 ಗಂಟೆಯಿಂದ ಜೂನ್ 13ರ ಸಂಜೆ 5 ಗಂಟೆವರೆಗೆ 308 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ 6,824 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 81 ಮಂದಿ ಮೃತಪಟ್ಟಿದ್ದಾರೆ.
ಈವರೆಗೆ 3,648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,092 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 15 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 06, ರಾಯಚೂರು 05, ಉತ್ತರ ಕನ್ನಡ 05, ಕೋಲಾರ 04, ದಾವಣಗೆರೆ 03, ಮಂಡ್ಯ 02, ಹಾವೇರಿ 02, ಮೈಸೂರು 01 ಮತ್ತು ಬಾಗಲಕೋಟೆ ಮತ್ತು ರಾಮನಗರದಲ್ಲಿ ತಲಾ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.