ADVERTISEMENT

Covid-19 Karnataka Update | ರಾಜ್ಯದಲ್ಲಿ ಇಂದು 453 ಹೊಸ ಪ್ರಕರಣ, ಐವರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2020, 13:32 IST
Last Updated 21 ಜೂನ್ 2020, 13:32 IST
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಜೂನ್ 20ರ ಸಂಜೆ 5 ಗಂಟೆಯಿಂದ ಜೂನ್ 21ರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ 453 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ 9,150 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 137 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 5,618 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,391 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 77 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಇಂದು ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 8, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ 3, ಚಿಕ್ಕಬಳ್ಳಾಪುರ 3, ಹಾವೇರಿ 3, ರಾಯಚೂರು 2, ಶಿವಮೊಗ್ಗ 2, ರಾಮನಗರ 2 ಮತ್ತು ಚಿಕ್ಕಮಗಳೂರಿನಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.