ಬೆಂಗಳೂರು: ಜೂನ್ 21ರ ಸಂಜೆ 5 ಗಂಟೆಯಿಂದ ಜೂನ್ 22ರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ 249 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ 9,399 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 142 ಮಂದಿ ಮೃತಪಟ್ಟಿದ್ದಾರೆ.
ಈವರೆಗೆ 5,730 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,523 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 80 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಂಗಳೂರು ನಗರ 126, ಕಲಬುರಗಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರ ಕನ್ನಡ 6, ಬಾಗಲಕೋಟೆ 6, ಬೀದರ್ 5, ಚಿಕ್ಕಮಗಳೂರು 5, ಧಾರವಾಡ 4, ಬೆಂಗಳೂರು ಗ್ರಾಮಾಂತರ 4, ರಾಮನಗರ 3, ಚಿತ್ರದುರ್ಗ 2, ತುಮಕೂರು 2, ಕೊಡಗು 2, ಯಾದಗಿರಿ 1, ಮೈಸೂರು 1, ಚಿಕ್ಕಬಳ್ಳಾಪುರ 1, ಗದಗ 1 ಮತ್ತು ಕೊಪ್ಪಳದಲ್ಲಿ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.