ADVERTISEMENT

Covid-19 Karnataka Update: ಸೋಂಕು ಖಚಿತ ಪ್ರಮಾಣ ಶೇ 1.92ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 17:45 IST
Last Updated 28 ಜೂನ್ 2021, 17:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ದೃಢ ಪ್ರಮಾಣ ಶೇ 1.92ಕ್ಕೆ ಇಳಿದಿದೆ. ಕೋವಿಡ್‌ ಎರಡನೇ ಅಲೆ ಕಾಣಿಸಿಕೊಂಡ ನಂತರ ವರದಿಯಾದ ಅತೀ ಕಡಿಮೆ ಪ್ರಮಾಣ ಇದಾಗಿದೆ.

ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಹೊಸದಾಗಿ 2,576 ಮಂದಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ. ಹಿಂದಿನ24 ಗಂಟೆಗಳಲ್ಲಿ 93 ಮಂದಿ ಸಾವಿಗೀಡಾಗಿದ್ದು, ಮರಣ ಪ್ರಮಾಣ ದರ ಶೇ3.61ರಷ್ಟಿದೆ. ಒಂದೇ ದಿನ1.33 ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ರಾಜ್ಯದಲ್ಲಿ ಸೋಮವಾರ5,933 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ97,592ಕ್ಕೆ ತಗ್ಗಿದೆ. ಈವರೆಗೆ27.04 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಸೋಂಕಿತರ ಸಂಖ್ಯೆ ಕ್ಷೀಣಿಸಿದೆ. ಬೆಂಗಳೂರಿನಲ್ಲಿ ಮತ್ತೆ 563 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಕ್ರಮವಾಗಿ263, 282 ಹಾಗೂ194 ಪ್ರಕರಣಗಳು ವರದಿಯಾಗಿವೆ. 18 ಜಿಲ್ಲೆಗಳಲ್ಲಿ ಇದು ಎರಡಂಕಿಯಷ್ಟಿದೆ. ಆರು ಜಿಲ್ಲೆಗಳಲ್ಲಿ ಒಂದಂಕಿಗೆ ತಗ್ಗಿದೆ.

ಬೆಂಗಳೂರು (18), ದಕ್ಷಿಣ ಕನ್ನಡ (14) ಹಾಗೂ ಬಳ್ಳಾರಿಯಲ್ಲಿ (9) ಅಧಿಕ ಮರಣ ಪ್ರಕರಣಗಳು ದಾಖಲಾಗಿವೆ.19 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಐದಕ್ಕಿಂತ ಕಡಿಮೆ ಇದೆ. ರಾಜ್ಯಕ್ಕೆ ಕೋವಿಡ್ ಕಾಲಿಟ್ಟ ದಿನದಿಂದ ಈವರೆಗೆ ಒಟ್ಟು34,836 ಜನ ಅಸು ನೀಗಿದ್ದಾರೆ. ಸೋಮವಾರ ಮೃತಪಟ್ಟವರ ಪೈಕಿ 54 ಜನ ಪುರುಷರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.