ADVERTISEMENT

Covid-19 Karnataka Update | 24 ಗಂಟೆಗಳಲ್ಲಿ 2,576 ಹೊಸ ಪ್ರಕರಣ, 29 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2020, 14:26 IST
Last Updated 2 ನವೆಂಬರ್ 2020, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2,576 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,29 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,29,640ಕ್ಕೆ ಏರಿಕೆಯಾಗಿದೆ. ಒಟ್ಟಾರೆ 11,221 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 7,73,595 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 44,805 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 931 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 8,334 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 1,439 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 3,10,088 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3.40 ಲಕ್ಷದ ಗಡಿ ದಾಟಿದೆ. ಇಂದು 14 ಜನರು ಮೃತಪಟ್ಟಿದ್ದು, ಈವರೆಗೂ 3,888 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬಾಗಲಕೋಟೆಯಲ್ಲಿ 04, ಬಳ್ಳಾರಿ 60, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 36, ಬೀದರ್ 04, ಚಾಮರಾಜನಗರ 19, ಚಿಕ್ಕಬಳ್ಳಾಪುರ 58, ಚಿಕ್ಕಮಗಳೂರು 46, ಚಿತ್ರದುರ್ಗ 44, ದಕ್ಷಿಣ ಕನ್ನಡ 51, ದಾವಣಗೆರೆ 32, ಧಾರವಾಡ 18, ಗದಗ 07, ಹಾಸನ 87, ಹಾವೇರಿ 06, ಕಲಬುರಗಿ 31, ಕೊಡಗು 03, ಕೋಲಾರ 16, ಕೊಪ್ಪಳ 28, ಮಂಡ್ಯ 92, ಮೈಸೂರು 100, ರಾಯಚೂರು 34, ರಾಮನಗರ 20, ಶಿವಮೊಗ್ಗ 44, ತುಮಕೂರು 123, ಉಡುಪಿ 31, ಉತ್ತರ ಕನ್ನಡ 44, ವಿಜಯಪುರ 46 ಮತ್ತು ಯಾದಗಿರಿಯಲ್ಲಿ 24 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.