ADVERTISEMENT

Covid-19 Karnataka Update: ಒಂದೇ ದಿನ 3,368 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ನವೆಂಬರ್ 2020, 14:17 IST
Last Updated 12 ನವೆಂಬರ್ 2020, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಾದ್ಯಂತ ಗುರುವಾರ ಒಂದೇ ದಿನ 3,368 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 2,116 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 21 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 11,474 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 8,14,949 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 29,470 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರು ನಗರದಲ್ಲಿ 1,069, ಮೈಸೂರು 115, ಹಾಸನ 100, ತುಮಕೂರು 80, ಮಂಡ್ಯ 74, ಬೆಳಗಾವಿ ಜಿಲ್ಲೆಯಲ್ಲಿ 54 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.