ADVERTISEMENT

Covid-19 Karnataka Update | 1,159 ಹೊಸ ಪ್ರಕರಣ, ಮರಣ ಪ್ರಮಾಣ ಶೇ 1.81

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಸೆಪ್ಟೆಂಬರ್ 2021, 12:58 IST
Last Updated 1 ಸೆಪ್ಟೆಂಬರ್ 2021, 12:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,159 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,21 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,50,604ಕ್ಕೆ ಏರಿಕೆಯಾಗಿದೆ. ಒಟ್ಟಾರೆ 37,339 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 28,94,827 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 18,412 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 1,112 ಜನರು ಬಿಡುಗಡೆಯಾಗಿದ್ದಾರೆ.

ಸೋಂಕು ದೃಢ ಪ್ರಮಾಣವು ಶೇ 0.66ರಷ್ಟಿದ್ದರೆ, ಮರಣ ಪ್ರಮಾಣವು ಶೇ 1.81ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು ಹೊಸದಾಗಿ 290 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 12,03,482 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12.28 ಲಕ್ಷದ ಗಡಿ ದಾಟಿದೆ. ಇಂದು ಇಬ್ಬರು ಮೃತಪಟ್ಟಿದ್ದು, ಈವರೆಗೂ 15,885 ಮಂದಿ ಸಾವಿಗೀಡಾಗಿದ್ದಾರೆ.

ಬೀದರ್, ಹಾವೇರಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ.

ಇನ್ನುಳಿದಂತೆ ಬಾಗಲಕೋಟೆಯಲ್ಲಿ 2, ಬಳ್ಳಾರಿ 6, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 9, ಚಾಮರಾಜನಗರ 9, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 7, ದಕ್ಷಿಣ ಕನ್ನಡ 191, ದಾವಣಗೆರೆ 8, ಧಾರವಾಡ 8, ಗದಗ 4, ಹಾಸನ 81, ಕಲಬುರಗಿ 5, ಕೊಡಗು 95, ಕೋಲಾರ 32, ಕೊಪ್ಪಳ 3, ಮಂಡ್ಯ 20, ಮೈಸೂರು 91, ರಾಮನಗರ 1, ಶಿವಮೊಗ್ಗ 11, ತುಮಕೂರು 34, ಉಡುಪಿ 91, ಉತ್ತರ ಕನ್ನಡ 37 ಮತ್ತು ವಿಜಯಪುರ ಜಿಲ್ಲೆಯಲ್ಲಿ ನಾಲ್ವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.