ADVERTISEMENT

Covid-19 Karnataka Update | 7,866 ಕೋವಿಡ್ ಪ್ರಕರಣ ದೃಢ, 7,803 ಜನರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಸೆಪ್ಟೆಂಬರ್ 2020, 16:05 IST
Last Updated 8 ಸೆಪ್ಟೆಂಬರ್ 2020, 16:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7,866 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,146 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ. ಒಟ್ಟಾರೆ 6,680 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 3,08,573 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 96,918 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 784 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 7,803 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,102 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 1,10,972 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1.53 ಲಕ್ಷದ ಗಡಿ ದಾಟಿದೆ. ಇಂದು 55 ಜನರು ಮೃತಪಟ್ಟಿದ್ದು, ಈವರೆಗೂ 2,266 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬಾಗಲಕೋಟೆಯಲ್ಲಿ 212, ಬಳ್ಳಾರಿ 404, ಬೆಳಗಾವಿ 230, ಬೆಂಗಳೂರು ಗ್ರಾಮಾಂತರ 104, ಬೀದರ್ 52, ಚಾಮರಾಜನಗರ 42, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 162, ಚಿತ್ರದುರ್ಗ 23, ದಕ್ಷಿಣ ಕನ್ನಡ 374, ದಾವಣಗೆರೆ 240, ಧಾರವಾಡ 318, ಗದಗ 196, ಹಾಸನ 219, ಹಾವೇರಿ 165, ಕಲಬುರಗಿ 199, ಕೊಡಗು 29, ಕೋಲಾರ 30, ಕೊಪ್ಪಳ 269, ಮಂಡ್ಯ 273, ಮೈಸೂರು 337, ರಾಯಚೂರು 209, ರಾಮನಗರ 28, ತುಮಕೂರು 153, ಉಡುಪಿ 250, ಉತ್ತರ ಕನ್ನಡ 24, ವಿಜಯಪುರ 61 ಮತ್ತು ಯಾದಗಿರಿಯಲ್ಲಿ 79 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.