ADVERTISEMENT

Covid-19 Karnataka Update | ರಾಜ್ಯದಲ್ಲಿಂದು 317 ಹೊಸ ಪ್ರಕರಣ, 5 ಜನ ಸಾವು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 15:06 IST
Last Updated 22 ಫೆಬ್ರುವರಿ 2021, 15:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 317 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,ಐವರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,48,466ಕ್ಕೆ ಏರಿಕೆಯಾಗಿದೆ. ಒಟ್ಟಾರೆ 12,299 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 9,30,087 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 6,061 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 128 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 353 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 181 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 3,95,104 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4.03 ಲಕ್ಷದ ಗಡಿ ದಾಟಿದೆ. ಇಂದು ಮೂವರು ಮೃತಪಟ್ಟಿದ್ದು, ಈವರೆಗೂ 4,454 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬಾಗಲಕೋಟೆಯಲ್ಲಿ 01, ಬಳ್ಳಾರಿ 04, ಬೆಳಗಾವಿ 00, ಬೆಂಗಳೂರು ಗ್ರಾಮಾಂತರ 01, ಬೀದರ್ 04, ಚಾಮರಾಜನಗರ 00, ಚಿಕ್ಕಬಳ್ಳಾಪುರ 07, ಚಿಕ್ಕಮಗಳೂರು 01, ಚಿತ್ರದುರ್ಗ 09, ದಕ್ಷಿಣ ಕನ್ನಡ 10, ದಾವಣಗೆರೆ 02, ಧಾರವಾಡ 07, ಗದಗ 00, ಹಾಸನ 04, ಹಾವೇರಿ 01, ಕಲಬುರಗಿ 04, ಕೊಡಗು 03, ಕೋಲಾರ 04, ಕೊಪ್ಪಳ 00, ಮಂಡ್ಯ 04, ಮೈಸೂರು 29, ರಾಯಚೂರು 00, ರಾಮನಗರ 00, ಶಿವಮೊಗ್ಗ 05, ತುಮಕೂರು 17, ಉಡುಪಿ 14, ಉತ್ತರ ಕನ್ನಡ 00, ವಿಜಯಪುರ 05 ಮತ್ತು ಯಾದಗಿರಿಯಲ್ಲಿ 00 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.