ADVERTISEMENT

Covid-19 Karnataka Update | ರಾಜ್ಯದಲ್ಲಿ 523 ಹೊಸ ಪ್ರಕರಣ, ಬೆಂಗಳೂರಲ್ಲಿ 329

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2021, 15:02 IST
Last Updated 27 ಫೆಬ್ರುವರಿ 2021, 15:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,ಆರು ಮಂದಿ ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದೆ. ಒಟ್ಟಾರೆ 12,326 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 9,32,747 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 5638 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 121 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 380 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 329 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 3,97,015 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,05,325ಕ್ಕೆ ಏರಿಕೆಯಾಗಿದೆ. ಇಂದು ಐವರು ಮೃತಪಟ್ಟಿದ್ದು, ಈವರೆಗೂ 4,474 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬಾಗಲಕೋಟೆಯಲ್ಲಿ 00, ಬಳ್ಳಾರಿ 10, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 05, ಬೀದರ್ 09, ಚಾಮರಾಜನಗರ 04, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 03, ಚಿತ್ರದುರ್ಗ 04, ದಕ್ಷಿಣ ಕನ್ನಡ 21, ದಾವಣಗೆರೆ 01, ಧಾರವಾಡ 04, ಗದಗ 02, ಹಾಸನ 08, ಹಾವೇರಿ 00, ಕಲಬುರಗಿ 17, ಕೊಡಗು 04, ಕೋಲಾರ 05, ಕೊಪ್ಪಳ 00, ಮಂಡ್ಯ 04, ಮೈಸೂರು 31, ರಾಯಚೂರು 00, ರಾಮನಗರ 00, ಶಿವಮೊಗ್ಗ 03, ತುಮಕೂರು 09, ಉಡುಪಿ 18, ಉತ್ತರ ಕನ್ನಡ 01, ವಿಜಯಪುರ 07 ಮತ್ತು ಯಾದಗಿರಿಯಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.