ADVERTISEMENT

Covid-19 Karnataka Update | ರಾಜ್ಯದಲ್ಲಿಂದು 383 ಹೊಸ ಪ್ರಕರಣ, 4 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2021, 15:00 IST
Last Updated 23 ಫೆಬ್ರುವರಿ 2021, 15:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,ನಾಲ್ವರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದೆ. ಒಟ್ಟಾರೆ 12,303 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 9,30,465 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 6,062 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 122 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 378 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 240 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 3,95,344 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4.04 ಲಕ್ಷದ ಗಡಿ ದಾಟಿದೆ. ಇಂದು ನಾಲ್ವರು ಮೃತಪಟ್ಟಿದ್ದು, ಈವರೆಗೂ 4,458 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.