ಬೆಂಗಳೂರು: ‘ಕೋವಿಡ್ ಸೇನಾನಿಯಾಗಿ ಕೆಲಸ ಮಾಡುತ್ತಿದ್ದವರ ಪೈಕಿ ಅನೇಕರು ಸೋಂಕಿಗೊಳಪಟ್ಟು ಮೃತರಾಗಿದ್ದಾರೆ. ಅಂತಹವರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ₹2 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲು ಚಿಂತಿಸಲಾಗಿದೆ. ಪದವಿ ಪೂರೈಸಿದವರಿಗೆ ಉದ್ಯೋಗ ಕಲ್ಪಿಸುವ ಆಲೋಚನೆಯೂ ಇದೆ. ಇದಕ್ಕಾಗಿ ಸಂಬಂಧಪಟ್ಟ ಕುಟುಂಬದವರು ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್ ತಿಳಿಸಿದರು.
ಆಸ್ಪತ್ರೆ ವತಿಯಿಂದಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಲು ನಿರ್ಧರಿಸಿದ್ದು ಈ ಕಾರ್ಯಕ್ರಮಕ್ಕೆ ನಟ ರಮೇಶ್ ಅರವಿಂದ್ ಸೋಮವಾರ ಚಾಲನೆ ನೀಡಿದರು.
‘ಕೋವಿಡ್ ಸೇನಾನಿಗಳನ್ನು ಸನ್ಮಾನಿಸುವ ಉದ್ದೇಶದಿಂದ ಇದೇ 31ರವರೆಗೂ ಕೃತಜ್ಞತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ನಮ್ಮ ತಂಡದವರು ಒಟ್ಟು 5 ವಾಹನಗಳಲ್ಲಿ 300ಕ್ಕೂ ಅಧಿಕ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.