ADVERTISEMENT

ಭಕ್ತರಿಗೆ ಪ್ರವೇಶ: ಸೋಮವಾರದೊಳಗೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 18:22 IST
Last Updated 1 ಜುಲೈ 2021, 18:22 IST
ಕೋಟಾ ಶ್ರೀನಿವಾಸ ಪೂಜಾರಿ
ಕೋಟಾ ಶ್ರೀನಿವಾಸ ಪೂಜಾರಿ   

ಬೆಂಗಳೂರು: ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧ ಸಡಿಲಿಸುವ ಸಂಬಂಧ ಜುಲೈ 5ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

‘ಭಕ್ತರಿಗೆ ಪ್ರವೇಶ ನೀಡಿದರೆ ಒಮ್ಮೆಲೆ ನೂರಾರು ಜನ ಒಂದೆಡೆ ಸೇರಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುವ ಆತಂಕ ಇದೆ. ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಅರ್ಚಕರಿಗೆ ಕೋವಿಡ್ ಲಸಿಕೆಯನ್ನು ಹಂತ– ಹಂತವಾಗಿ ನೀಡಲಾಗುತ್ತಿದೆ. ಅರ್ಚಕರಿಗೆ ಸೀಮಿತವಾಗಿ ದೇಗಲುಗಳಲ್ಲಿ ಪೂಜೆ ಪುನಸ್ಕಾರ, ಆನ್‌ಲೈನ್‌ನಲ್ಲಿ ಪೂಜೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.