ADVERTISEMENT

Covid-19 Karnataka Update | ಇಂದು 210 ಹೊಸ ಪ್ರಕರಣ; 179 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2020, 14:02 IST
Last Updated 18 ಜೂನ್ 2020, 14:02 IST
   

ಬೆಂಗಳೂರು: ರಾಜ್ಯದಲ್ಲಿ ಜೂನ್‌ 17ರಸಂಜೆ 5 ಗಂಟೆಯಿಂದ ಜೂನ್‌ 18ರ ಸಂಜೆ 5ರ ವರೆಗೆ ಒಟ್ಟು 210 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 12 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,944 ಆಗಿದ್ದು, ಸಾವಿನ ಸಂಖ್ಯೆ 114ಕ್ಕೆ ಏರಿಕೆಯಾಗಿದೆ. ಈವರೆಗೆ 4,983 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2,843 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 179 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ ಕಂಡುಬಂದ ಪ್ರಕರಣಗಳ ಪೈಕಿ 21 ಮಂದಿ ಬೇರೆ ದೇಶದಿಂದ ಬಂದವರಾದರೆ, 58 ಮಂದಿ ಅನ್ಯ ರಾಜ್ಯ ಪ್ರಯಾಣಿಕರು.

ADVERTISEMENT

ಇಂದು ಬಳ್ಳಾರಿ ಮತ್ತು ಕಲಬುರ್ಗಿಯಲ್ಲಿ ಅತಿಹೆಚ್ಚು (48) ಪ್ರಕರಣಗಳು ವರದಿಯಾಗಿವೆ. ಉಳಿದಂತೆ,ದಕ್ಷಿಣಕನ್ನಡದಲ್ಲಿ 23, ರಾಮನಗರದಲ್ಲಿ 21, ಬೆಂಗಳೂರು ನಗರದಲ್ಲಿ 17, ಯಾದಗಿರಿಯಲ್ಲಿ 8, ಮಂಡ್ಯದಲ್ಲಿ 7, ಬೀದರ್‌ನಲ್ಲಿ 6, ಗದಗದಲ್ಲಿ 5 ಪ್ರಕರಣಗಳು ವರದಿಯಾಗಿವೆ.

ರಾಯಚೂರು, ಹಾಸನ, ಧಾರವಾಡದಲ್ಲಿ ತಲಾ 4 ಪ್ರಕರಣಗಳು, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 3, ವಿಜಯಪುರ, ಮೈಸೂರು ಮತ್ತು ಉತ್ತರಕನ್ನಡದಲ್ಲಿ ತಲಾ 2, ಬಾಗಲಕೋಟೆ, ಶಿವಮೊಗ್ಗ ಮತ್ತು ಕೊ‌ಪ್ಪಳದಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.

ಬೆಂಗಳೂರಲ್ಲಿ 51 ಸಾವು
ಅತಿ ಹೆಚ್ಚು ಸೋಂಕಿತರು ಮೃತಪಟ್ಟಿರುವುದುರಾಜಧಾನಿ ಬೆಂಗಳೂರಿನಲ್ಲಿ. ಇಲ್ಲಿ 51 ಮಂದಿ ಮೃತಪಟ್ಟಿದ್ದಾರೆ. ನಗರದ ಒಟ್ಟು 844 ಜನರಲ್ಲಿಇದುವರೆಗೆಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ 384 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 408 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.