ADVERTISEMENT

Covid-19 Karnataka Update: 797 ಮಂದಿ ರೋಗಮುಕ್ತಿ, 496 ಹೊಸ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 16:48 IST
Last Updated 11 ಜನವರಿ 2021, 16:48 IST
   

ಬೆಂಗಳೂರು: ರಾಜ್ಯದಲ್ಲಿ 24 ತಾಸಿನಲ್ಲಿ ಹೊಸತಾಗಿ 496 ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಕೋವಿಡ್-19 ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9344ಕ್ಕೆ ತಲುಪಿದೆ.

ಇಂದು ಆಸ್ಪತ್ರೆಯಿಂದ 797 ಮಂದಿ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 906548 ಮಂದಿ ರೋಗಮುಕ್ತಿಯನ್ನು ಪಡೆದಿದ್ದಾರೆ.

ADVERTISEMENT

ಇನ್ನು ನಾಲ್ಕು ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 12144ಕ್ಕೆ ಏರಿಕೆಯಾಗಿದೆ.

ಅಂದ ಹಾಗೆ ರಾಜ್ಯದಲ್ಲಿ ಇದವರೆಗೆ ಒಟ್ಟು 928055 ಕೋವಿಡ್-19 ಪ್ರಕರಣಗಳು ದಾಖಲಾಗಿದೆ.

ಜನವರಿ 16ರಿಂದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮವು ಪ್ರಾರಂಭವಾಗಲಿದೆ. ಇದರ ಪೂರ್ವ ಸಿದ್ಧತೆಯಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಸಂವಾದ ನಡೆಸಿದರು. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಸಭೆಯಲ್ಲಿ ಪಾಲ್ಗೊಂಡರು.

ಮೊದಲ ಹಂತದಲ್ಲಿ 6.3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ರಾಜ್ಯ ಸಜ್ಜಾಗಿದೆ ಎಂದು ಆರೋಗ್ಯಸಚಿವ ಡಾ. ಸುಧಾಕರ್ ಕೆಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.