ಬೆಂಗಳೂರು:ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5ರ ವರೆಗೆ ಒಟ್ಟು 6,259 ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 110 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,704ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ6,777 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ69,272ಕ್ಕೆ ಹೆಚ್ಚಾಗಿದೆ. ಇನ್ನೂ 73,846 ಪ್ರಕರಣಗಳು ಸಕ್ರಿಯವಾಗಿವೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೋವಿಡ್–19 ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,035 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಇದರಲ್ಲಿ 27,877 ಸೋಂಕಿತರುಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 34,021 ಪ್ರಕರಣಗಳು ಸಕ್ರಿಯವಾಗಿವೆ.
ಉಳಿದಂತೆ ಮೈಸೂರಿನಲ್ಲಿ 662, ಕಲಬುರ್ಗಿಯಲ್ಲಿ 285, ಬಳ್ಳಾರಿಯಲ್ಲಿ 284, ಬೆಳಗಾವಿಯಲ್ಲಿ 263, ದಕ್ಷಿಣ ಕನ್ನಡದಲ್ಲಿ 225, ದಾವಣಗೆರೆಯಲ್ಲಿ 191 ಪ್ರಕರಣಗಳು ವರದಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.