ADVERTISEMENT

Covid-19 Karnataka Update: ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 14:58 IST
Last Updated 10 ಸೆಪ್ಟೆಂಬರ್ 2021, 14:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರದಂದು 967 ಕೋವಿಡ್‌ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಗುರುವಾರದಂದು 1,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.

ರಾಜ್ಯದಲ್ಲಿ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,60,131ಕ್ಕೆ ತಲುಪಿದೆ.

ADVERTISEMENT

ಕಳೆದ 24 ತಾಸಿನ ಅವಧಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,472 ಆಗಿದೆ.

ಶುಕ್ರವಾರದಂದು ಆಸ್ಪತ್ರೆಯಿಂದ 921 ಮಂದಿ ಬಿಡುಗಡೆ ಹೊಂದಿದ್ದಾರೆ. ಆ ಮೂಲಕ ಇದುವರೆಗೆ 29,05,604 ಮಂದಿ ಕೊರೊನಾ ವೈರಾಣುವಿನಿಂದ ಮುಕ್ತಿ ಪಡೆದಿದ್ದಾರೆ.

ರಾಜ್ಯದಲ್ಲಿ 17,028 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.57 ರಷ್ಟಿದ್ದು, ಮರಣ ಪ್ರಮಾಣ ಶೇ. 1.03 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ. ಇನ್ನುಳಿದಂತೆ ದಕ್ಷಿಣ ಕನ್ನಡ 141, ಉಡುಪಿ 96, ಕೊಡಗು 74, ಹಾಸನ 61 ಮತ್ತು ಮೈಸೂರು ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.