ADVERTISEMENT

Covid-19 Karnataka Update: 973 ಹೊಸ ಪ್ರಕರಣ, 17 ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಸೆಪ್ಟೆಂಬರ್ 2021, 13:43 IST
Last Updated 6 ಸೆಪ್ಟೆಂಬರ್ 2021, 13:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಂದು 973 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,56,137ಕ್ಕೆ ತಲುಪಿದೆ.

ಕಳೆದ 24 ತಾಸಿನಲ್ಲಿ 9,73 ಹೊಸ ಪ್ರಕರಣಗಳು ವರದಿಯಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ. ಇಂದಿನ ವರೆಗೆ ಕೋವಿಡ್ ಸೋಂಕಿನಿಂದ 37,426 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್ ರೋಗದಿಂದ ಗುಣಮುಕ್ತರಾಗಿ 1,071 ಮಂದಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು 29,01,299 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,386ಕ್ಕೆ ತಲುಪಿದೆ.

24 ತಾಸಿನಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.69 ಮತ್ತು ಮೃತಪಟ್ಟವರ ಶೇಕಡಾವಾರು ಪ್ರಮಾಣ 1.74 ಆಗಿದೆ.

ಬೆಂಗಳೂರು ನಗರದಲ್ಲಿ 243 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡದಲ್ಲಿ 258, ಮೈಸೂರು 78, ಹಾಸನ 62, ಉಡುಪಿ 53 ಮತ್ತು ಕೊಡಗಿನಲ್ಲಿ 52 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.