ADVERTISEMENT

Covid-19 Karnataka Update: ರಾಜ್ಯದಲ್ಲಿ 10 ಸಾವಿರಕ್ಕೆ ಇಳಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 14:13 IST
Last Updated 2 ಜನವರಿ 2021, 14:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 755 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 1.14 ಲಕ್ಷ ಜನರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಇವರಲ್ಲಿ 755 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ಒಂದೇ ದಿನ 976 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.22 ಲಕ್ಷ ಮುಟ್ಟಿದ್ದು, ಈ ಪೈಕಿ 8.98 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 12,099 ಮಂದಿ ಸಾವಿಗೀಡಾಗಿದ್ದು, 10,834 ಪ್ರಕರಣಗಳು ಸಕ್ರಿಯವಾಗಿವೆ.

ADVERTISEMENT

ಪ್ರಸ್ತುತ 186 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 343 ಪ್ರಕರಣಗಳು, ಮೈಸೂರಿನಲ್ಲಿ 78, ದಕ್ಷಿಣ ಕನ್ನಡ 37, ಚಿಕ್ಕಬಳ್ಳಾಪುರದಲ್ಲಿ 28 ಹಾಗೂ ಉತ್ತರ ಕನ್ನಡದಲ್ಲಿ 28 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ.

ಗದಗ 1, ಯಾದಗಿರಿ 2, ದಾವಣಗೆರೆ 4, ಚಿತ್ರದುರ್ಗದಲ್ಲಿ 5 ಪ್ರಕರಣಗಳು ವರದಿಯಾಗಿವೆ. ರಾಮನಗರದಲ್ಲಿ ಯಾವುದೇ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.