ADVERTISEMENT

Covid-19 Karnataka Update: ರಾಜ್ಯದಲ್ಲಿ ಇಂದು 430 ಹೊಸ ಪ್ರಕರಣಗಳು ದಾಖಲು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 14:18 IST
Last Updated 11 ಫೆಬ್ರುವರಿ 2021, 14:18 IST
   

ಬೆಂಗಳೂರು:ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ430 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ7 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,44,057 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 12,251ಕ್ಕೆ ತಲುಪಿದೆ. ಗುರುವಾರ ಗುಣಮುಖರಾಗಿ ಬಿಡುಗಡೆಯಾಗಿರುವ340ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 9,25,829 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,958 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 137 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಲ್ಲಿ 3,920 ಸಾವಿರ ಸಕ್ರಿಯ ಪ್ರಕರಣ
ಬೆಂಗಳೂರಿನಲ್ಲಿ ಇಂದು 228 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ401323ಆಗಿದೆ. ಇದರಲ್ಲಿ 3,92,985 ಸೋಂಕಿತರು ಗುಣಮುಖರಾಗಿದ್ದು, 4,417 ಮಂದಿ ಮೃತಪಟ್ಟಿದ್ದಾರೆ. ಇನ್ನೂ 3,920 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಉಳಿದಂತೆ ಚಿತ್ರದುರ್ಗ (155), ದಕ್ಷಣ ಕನ್ನಡ (332), ಕಲಬುರ್ಗಿ (163), ಮೈಸೂರು (213), ತುಮಕೂರಿನಲ್ಲಿ (320) ನೂರಕ್ಕಿಂತ ಹೆಚ್ಚು ಪ್ರಕರಣಗಳು ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.