ADVERTISEMENT

Covid-19 Karnataka Update: ರಾಜ್ಯದಲ್ಲಿ 239 ಪ್ರಕರಣ, 5 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2021, 16:33 IST
Last Updated 2 ನವೆಂಬರ್ 2021, 16:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 239 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 29,88,760ಕ್ಕೆ ಏರಿಕೆಯಾಗಿದೆ. 38,089 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 29,42,272 ಮಂದಿ ಸೋಂಕಿತರು ಈವರೆಗೆ ಗುಣಮುಖರಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ ರಾಜ್ಯದಲ್ಲಿ 8,370 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.39ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 139, ಮೈಸೂರಿನಲ್ಲಿ 31, ದಕ್ಷಿಣ ಕನ್ನದಲ್ಲಿ 18 ಪ್ರಕರಣಗಳು ವರದಿಯಾಗಿವೆ.

ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 27 ಜಿಲ್ಲೆಗಳಲ್ಲಿ ಹೊಸ ಮರಣ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ 34 ವರ್ಷದ ಮಹಿಳೆಯೊಬ್ಬರು ಕೆಮ್ಮು, ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಸಾವಿಗೀಡಾಗಿದ್ದಾರೆ. ಉಳಿದ ನಾಲ್ವರು 70 ವರ್ಷ ಮೇಲ್ಪಟ್ಟವರಾಗಿದ್ದಾರೆ.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಮಂಗಳವಾರ 60,711 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.