ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ ಸೋಂಕಿತ 7,418 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಭಾನುವಾರ 348 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.19 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ.ಒಂದು ದಿನದಲ್ಲಿ 73 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.47 ರಷ್ಟಿದೆ. ಮೂರು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 15 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್ ಸೇರಿದಂತೆ 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.
ಬೆಂಗಳೂರು ನಗರದಲ್ಲಿ 248 ಮಂದಿಕೋವಿಡ್ಪೀಡಿತರಾಗಿದ್ದಾರೆ. ಕೊಡಗಿನಲ್ಲಿ 18, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ 11 ಪ್ರಕರಣಗಳುವರದಿಯಾಗಿವೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.04 ಲಕ್ಷ ದಾಟಿದೆ.
ಸೋಂಕಿತರಲ್ಲಿ 198 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.58 ಲಕ್ಷ ದಾಟಿದೆ. ಬೆಂಗಳೂರಿನಲ್ಲಿ 6,048 ಸೋಂಕಿತರಿದ್ದಾರೆ.ಯಾದಗಿರಿ ಹಾಗೂ ಗದಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಬೀದರ್, ಬಾಗಲಕೋಟೆ ಸೇರಿದಂತೆ 8 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.
ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಹಾಗೂ ಚಾಮರಾಜನಗರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.86 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,312ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.