ADVERTISEMENT

Covid-19 Karnataka Update: ಸೋಂಕಿತರ ಸಂಖ್ಯೆ ಇಳಿಕೆ, ಮೃತರ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2021, 13:35 IST
Last Updated 18 ಸೆಪ್ಟೆಂಬರ್ 2021, 13:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 889 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೆ ಸೋಂಕಿನಿಂದ 1,080 ಮಂದಿ ಗುಣಮುಖರಾಗಿದ್ದಾರೆ ಹಾಗೂ 14 ಮಂದಿ ಮೃತಪಟ್ಟಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 15,755 ಪ್ರಕರಣಗಳು ಸಕ್ರಿಯವಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 29,67,083 ಪ್ರಕರಣಗಳ ಪೈಕಿ 29,13,713 ಮಂದಿ ಗುಣಮುಖರಾಗಿದ್ದಾರೆ ಹಾಗೂ 37,587 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ದೃಢ ಪ್ರಮಾಣ ಶೇಕಡ 0.63 ಮತ್ತು ಕೋವಿಡ್‌ ಮೃತ ಪ್ರಮಾಣ ಶೇಕಡ 1.57 ರಷ್ಟು ವರದಿಯಾಗಿದೆ.

ADVERTISEMENT

ಬೆಂಗಳೂರಿನಲ್ಲಿ 263 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 133, ಉಡುಪಿಯಲ್ಲಿ 86, ಮೈಸೂರಿನಲ್ಲಿ 74 ಹಾಗೂ ತುಮಕೂರಿನಲ್ಲಿ 27 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.