ಬೆಂಗಳೂರು: ರಾಜ್ಯದಲ್ಲಿ ಮೇ 22ರ ಸಂಜೆ 5ರಿಂದ ಮೇ 23ರ ಸಂಜೆ 5ರವರೆಗೆ 216 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 1959ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದಾಗಿ ಇಂದು ಓರ್ವಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್–19 ಸೋಂಕಿನಿಂದಾಗಿ ಸಾವಿನ ಸಂಖ್ಯೆ 42 ಆಗಿದೆ. ಇದುವರೆಗೆ ಒಟ್ಟು 608 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1,307ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 28, ಕಲಬುರಗಿ 1, ಬೆಳಗಾವಿ 1, ದಾವಣಗೆರೆ 3, ಚಿಕ್ಕಬಳ್ಳಾಪುರ 26, ಯಾದಗಿರಿ 72, ಹಾಸನ 4, ಬೀದರ್ 3, ಉತ್ತರ ಕನ್ನಡ 2, ರಾಯಚೂರು 40, ದಕ್ಷಿಣ ಕನ್ನಡ 3, ಉಡುಪಿ 3, ಧಾರವಾಡ 5, ಗದಗ 15, ಬಳ್ಳಾರಿ 3 ಮತ್ತು ಕೋಲಾರದಲ್ಲಿ 3 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.