ಬೆಂಗಳೂರು: ಕೋವಿಡ್ನಿಂದ ದೇಶದ ಜನರನ್ನು ರಕ್ಷಿಸಲಾಗದ ಸರ್ಕಾರದ ವೈಫಲ್ಯ ಲಕ್ಷಾಂತರ ಜನರ ದಾರುಣ ಸಾವಿಗೆ ಕಾರಣವಾಯಿತು ಎಂದು ಕರ್ನಾಟಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಹೆಚ್ಚುತ್ತಿರುವ ಆತ್ಮಹತ್ಯೆಗಳ ಕುರಿತ ಪ್ರಜಾವಾಣಿ ವರದಿಯನ್ನು ಆಧರಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ, 'ಅವೈಜ್ಞಾನಿಕ ಲಾಕ್ಡೌನ್, ಸಿಗದ ನಷ್ಟ ಪರಿಹಾರ, ಉದ್ಯೋಗ ನಷ್ಟ, ಬೆಲೆಏರಿಕೆ, ಆರ್ಥಿಕ ಸಂಕಷ್ಟದಿಂದ ಆಘಾತ, ಖಿನ್ನತೆಗೊಳಗಾದ ಜನ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಜನರ ಜೀವ, ಜೀವನದ ಕನಿಷ್ಟ ಕಾಳಜಿಯೂ ಈ ಬಿಜೆಪಿ ಸರ್ಕಾರಗಳಿಗಿಲ್ಲ' ಎಂದು ಟೀಕಿಸಿದೆ.
'ಲಾಕ್ಡೌನ್ ನಂತರದ ಬೆಲೆ ಏರಿಕೆಯಿಂದ ದೇಶದ ಆರ್ಥಿಕತೆ, ಜನರ ಬದುಕು ಮೂರಾಬಟ್ಟೆಯಾಗಿದ್ದು ಕಣ್ಣ ಮುಂದಿದೆ. ಹೀಗಿದ್ದೂ ಬಿಜೆಪಿಗರು ಬೆಲೆ ಏರಿಕೆಯಿಂದ ಜನತೆಗೆ ಸಮಸ್ಯೆ ಇಲ್ಲ ಎಂದು ಉಡಾಫೆ ಮಾತನಾಡುತ್ತಿರುವುದು ನಾಚಿಕೆಗೇಡು. ಬಡ ಬೀದಿ ವ್ಯಾಪಾರಿಗಳ, ಬಡ ಗ್ರಾಹಕರು ಮದ್ಯಮವರ್ಗದವರ ಈ ಬವಣೆಯೇ ದೇಶದ ಆರ್ಥಿಕ ದುರ್ಗತಿಗೆ ಹಿಡಿದ ಕನ್ನಡಿ' ಎಂದೂ ಕೆಪಿಸಿಸಿ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.