ADVERTISEMENT

Covid-19 Karnataka Update: ಸಾವಿರದತ್ತ ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 19:45 IST
Last Updated 30 ಸೆಪ್ಟೆಂಬರ್ 2021, 19:45 IST
   

ಬೆಂಗಳೂರು:ರಾಜ್ಯದಲ್ಲಿ ಗುರು ವಾರ933 ಕೋವಿಡ್ಪ್ರಕರಣಗಳು ದೃಢಪಟ್ಟಿವೆ. 13 ದಿನಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಸೆ.17ರಂದು 1,003 ಪ್ರಕರಣಗಳು ಖಚಿತಪಟ್ಟಿದ್ದವು. ಬಳಿಕ ಈ ಸಂಖ್ಯೆ 500ರ ಗಡಿಯ ಆಸುಪಾಸಿನಲ್ಲಿತ್ತು.ಒಂದು ದಿನದ ಅವಧಿಯಲ್ಲಿ 1.14 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.81 ರಷ್ಟು ವರದಿಯಾಗಿದೆ.11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 15 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲ ಕೋಟೆ, ಬೀದರ್ ಹಾಗೂ ರಾಯಚೂರಿನಲ್ಲಿಹೊಸಪ್ರಕರಣವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 94, ಮೈಸೂರಿನಲ್ಲಿ 76 ಹಾಗೂಕೊಡಗಿನಲ್ಲಿ 48 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 291, ಉಡುಪಿಯಲ್ಲಿ 77 ಹಾಗೂ ತುಮಕೂರಿನಲ್ಲಿ 54 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.76 ಲಕ್ಷಕ್ಕೆ ತಲುಪಿದೆ.

ADVERTISEMENT

ಸೋಂಕಿತರಲ್ಲಿ704 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾವರ ಒಟ್ಟು ಸಂಖ್ಯೆ 29.25 ಲಕ್ಷದಾಟಿದೆ.ಕೋವಿಡ್ಸಕ್ರಿಯಪ್ರಕರಣಗಳ ಸಂಖ್ಯೆ 12,780ಕ್ಕೆ ಏರಿಕೆಯಾಗಿದೆ.

ಕೋವಿಡ್ಪೀಡಿತರಲ್ಲಿ14 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.7 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 5, ದಕ್ಷಿಣ ಕನ್ನಡದಲ್ಲಿ 3, ಹಾಸನದಲ್ಲಿ ಇಬ್ಬರು, ಬೆಳಗಾವಿ, ಮೈಸೂರು, ತುಮಕೂರು ಹಾಗೂ ಉತ್ತರ ಕನ್ನಡ
ದಲ್ಲಿತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ಮರಣ ಪ್ರಮಾಣ ದರವು ಶೇ 1.50 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,794ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.