ADVERTISEMENT

ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಮತ್ತೆ ಉಲ್ಬಣಗೊಂಡ ಕೊರೊನಾ ಸೋಂಕು: ಅಶ್ವತ್ಥನಾರಾಯಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜುಲೈ 2021, 14:30 IST
Last Updated 30 ಜುಲೈ 2021, 14:30 IST
ಡಾ.ಸಿ.ಎನ್‌.ಅಶ್ವತ್ಥನಾರಾಯಣ
ಡಾ.ಸಿ.ಎನ್‌.ಅಶ್ವತ್ಥನಾರಾಯಣ   

ಬೆಂಗಳೂರು: ಇಲ್ಲಿನ ಮಾರುಕಟ್ಟೆಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಟ್ವೀಟ್‌ ಮಾಡಿರುವ ಅವರು, 'ಬೆಂಗಳೂರಿನ ಮಾರ್ಕೆಟ್ ಪ್ರದೇಶಗಳು ಹಾಗೂ 10ಕ್ಕೂ ಹೆಚ್ಚಿನ ವಾರ್ಡ್‌ಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ' ಎಂದು ಹೇಳಿದ್ದಾರೆ.

'ಸಡಿಲಗೊಂಡ ನಿಯಮಗಳನ್ನು ದುರುಪಯೋಗಪಡಿಸದೆ, ನಾಗರಿಕರು ಕಟ್ಟುನಿಟ್ಟಾಗಿ ದೈಹಿಕ ಅಂತರ, ಮಾಸ್ಕ್ ಧಾರಣೆ, ಮುಂತಾದ ಅಗತ್ಯ ಕ್ರಮಗಳನ್ನು ಪಾಲಿಸಬೇಕಾಗಿದೆ. ಮೂರನೇ ಅಲೆಯನ್ನು ತಡೆಯೋಣ' ಎಂದು ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಾದ್ಯಂತ 426 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 9 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 8, 467 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.