ಬೆಂಗಳೂರು: ಮಾರ್ಚ್ 21 ರಿಂದ ಕಲಬುರ್ಗಿಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ್ದು, ಇದರಿಂದಾಗಿ ಕಲಬುರ್ಗಿಯಲ್ಲಿ ಕೋವಿಡ್-19 ಸೋಂಕು ತಗುಲಿರುವ ಶಂಕಿತರ ಪರೀಕ್ಷೆಗೆ ಆಗುತ್ತಿದ್ದ ವಿಳಂಬ ತಪ್ಪಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನೆರವಿನ ಈ ಪ್ರಯೋಗಾಲಯ ಕೇಂದ್ರವನ್ನು ಆರಂಭಿಸಲು ನವದೆಹಲಿಯಿಂದ ಈಗಾಗಲೇ ರೀಜೆಂಟ್ ಬಂದಿದ್ದು ಬೆಂಗಳೂರಿನಿಂದ ತಜ್ಞರ ತಂಡ ತೆರಳಿ ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.