ಮಂಡ್ಯ: ಕೋವಿಡ್–19ನಿಂದ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಎಚ್.ಮಲ್ಲಿಗೆರೆ ಗ್ರಾಮದ ಎಂ.ಜೆ.ಮಧುಸೂದನ್ (35) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.
ಮಾರ್ಚ್ 18ರಂದು ಮಧುಸೂದನ್ ತಾಯಿಗೆ ಕೋವಿಡ್ ದೃಢಪಟ್ಟಿತ್ತು, ಅವರು ಗುಣಮುಖರಾಗಿದ್ದರು. ಪ್ರಾಥಮಿಕ ಸಂಪರ್ಕಿತರಾಗಿದ್ದ ಮಧುಸೂದನ್, ಪತ್ನಿ ಹಾಗೂ ತಂದೆಗೂ ಕೋವಿಡ್ ದೃಢಪಟ್ಟಿತ್ತು. ಮಾರ್ಚ್ 23ರಂದು ಅವರು ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಧುಸೂದನ್ ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ಧಾರೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ 154 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.