ADVERTISEMENT

Karnataka Covid Update: ಕೋವಿಡ್- 3.57 ಲಕ್ಷಕ್ಕೆ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 17:00 IST
Last Updated 26 ಜನವರಿ 2022, 17:00 IST
ಕೋವಿಡ್
ಕೋವಿಡ್   

ಬೆಂಗಳೂರು:ರಾಜ್ಯದಲ್ಲಿ ಬುಧವಾರ48,905 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.ಸಕ್ರಿಯಪ್ರಕರಣಗಳ ಸಂಖ್ಯೆ 3.57 ಲಕ್ಷಕ್ಕೆ ಏರಿಕೆಯಾಗಿದೆ.

ಒಂದು ದಿನದ ಅವಧಿಯಲ್ಲಿ 2.17 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 22.51 ರಷ್ಟಿದೆ.ಈವರೆಗೆ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 36.54 ಲಕ್ಷಕ್ಕೆ ಏರಿಕೆಯಾಗಿದೆ.

ಒಂಬತ್ತು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ, 20 ಜಿಲ್ಲೆಗಳಲ್ಲಿ ಮೂರು ಅಂಕಿಯಲ್ಲಿದೆ.ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಕಂಡಿದ್ದು, 22,427 ಮಂದಿ ಸೋಂಕಿತರಾಗಿದ್ದಾರೆ. ಮೈಸೂರಿನಲ್ಲಿ 2,797, ತುಮಕೂರಿನಲ್ಲಿ 2,645, ಮಂಡ್ಯದಲ್ಲಿ 2,186, ಹಾಸನದಲ್ಲಿ 2,016, ಕೋಲಾರದಲ್ಲಿ 1,547, ಧಾರವಾಡದಲ್ಲಿ 1,523, ಉಡುಪಿಯಲ್ಲಿ 1,392, ಬಳ್ಳಾರಿಯಲ್ಲಿ 1,141 ಹಾಗೂ ಕಲಬುರಗಿಯಲ್ಲಿ 1,007ಮಂದಿ ಕೋವಿಡ್ ಪೀಡಿತರಾಗಿದ್ದಾರೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ.

ADVERTISEMENT

ಸೋಂಕಿತರಲ್ಲಿ ಬೆಂಗಳೂರಿನಲ್ಲಿ 18,734 ಮಂದಿ ಸೇರಿದಂತೆ ರಾಜ್ಯದಲ್ಲಿ 41,699 ಮಂದಿ ಚೇತರಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 32.57 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ2.16 ಲಕ್ಷ ಮಂದಿ ಸೋಂಕಿತರಿದ್ದಾರೆ.

ಕೊರೊನಾ ಸೋಂಕಿತರಲ್ಲಿ 39 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಎಂಟು ಮಂದಿ, ಹಾಸನ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ ನಾಲ್ವರು, ಮೈಸೂರಿನಲ್ಲಿ ಮೂವರು, ಉತ್ತರ ಕನ್ನಡ, ರಾಮನಗರ, ಮಂಡ್ಯ, ಕಲಬುರಗಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು ಸಾವಿಗೀಡಾಗಿರುವುದು ಖಚಿತಪಟ್ಟಿದೆ.

ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.07 ರಷ್ಟಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,705ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.