ADVERTISEMENT

Covid-19 Karnataka Update: ರಾಜ್ಯದಲ್ಲಿ 85,997 ಪ್ರಕರಣಗಳು ಸಕ್ರಿಯ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 19:47 IST
Last Updated 29 ಜೂನ್ 2021, 19:47 IST
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಫುಟ್ನಿಕ್‌–ವಿ ಕೋವಿಡ್‌–19 ಲಸಿಕೆ ಹಾಕಿಸಿಕೊಂಡ ತೃತೀಯ ಲಿಂಗಿಗಳು
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಫುಟ್ನಿಕ್‌–ವಿ ಕೋವಿಡ್‌–19 ಲಸಿಕೆ ಹಾಕಿಸಿಕೊಂಡ ತೃತೀಯ ಲಿಂಗಿಗಳು   

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ 93 ಮಂದಿ ಮೃತಪಟ್ಟಿರುವುದು ಮಂಗಳವಾರ ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 35 ಸಾವಿರದತ್ತ (34,929)ಸಾಗಿದೆ.

ಮರಣ ಪ್ರಮಾಣ ದರವು ಶೇ 2.88ರಷ್ಟು ವರದಿಯಾಗಿದೆ. ಈ ತಿಂಗಳು 29 ದಿನಗಳಲ್ಲಿ 5,839 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಮೇ ತಿಂಗಳ ಮೊದಲ ವಾರದಲ್ಲಿ 500ರ ಗಡಿಗೆ ಏರಿಕೆ ಕಂಡಿದ್ದ ಮರಣ ಪ್ರಕರಣಗಳ ಸಂಖ್ಯೆ, ಕೆಲ ದಿನಗಳಿಂದ ನೂರರ ಗಡಿಯೊಳಗೆ ವರದಿಯಾಗುತ್ತಿದೆ.

ರಾಜ್ಯದಲ್ಲಿ ಹೊಸದಾಗಿ 3,222 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.26 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 2.54 ರಷ್ಟು ವರದಿಯಾಗಿದೆ. ರಾಜ್ಯದ 29 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗಿವೆ. ಬೆಂಗಳೂರಿನಲ್ಲಿ 753 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಸಂಖ್ಯೆ 16 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.40 ಲಕ್ಷ ದಾಟಿದೆ.

ADVERTISEMENT

ರಾಜ್ಯದ 21 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 16 ಮಂದಿ, ದಕ್ಷಿಣ ಕನ್ನಡದಲ್ಲಿ 15 ಹಾಗೂ ಮೈಸೂರಿನಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳುವರದಿಯಾಗಿವೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ85,997 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರಲ್ಲಿ 14,724 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.19 ಲಕ್ಷದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.