ADVERTISEMENT

Covid-19 Karnataka Update: 899 ಹೊಸ ಪ್ರಕರಣ ದೃಢ, 4 ಸಾವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 14:37 IST
Last Updated 9 ಜನವರಿ 2021, 14:37 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 899 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.26 ಲಕ್ಷ ತಲುಪಿದ್ದು, ಈ ಪೈಕಿ 9.05 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 12,138 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ, 9,452 ಸಕ್ರಿಯ ಪ್ರಕರಣಗಳಿವೆ.

ಶನಿವಾರ 872 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಸ್ತುತ 202 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 465, ಕೋಲಾರ 52, ಮೈಸೂರಿನಲ್ಲಿ 42, ದಕ್ಷಿಣ ಕನ್ನಡ 37, ಚಿಕ್ಕಬಳ್ಳಾಪುರ 31, ಹಾಸನ 31, ಬೆಳಗಾವಿ ಜಿಲ್ಲೆಯಲ್ಲಿ 23 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.