ADVERTISEMENT

Covid-19 Karnataka Update: ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2021, 17:10 IST
Last Updated 11 ಆಗಸ್ಟ್ 2021, 17:10 IST
ಬೆಂಗಳೂರು ರೈಲು ನಿಲ್ದಾಣದಲ್ಲಿ ಬಾಲಕಿಗೆ ಕೋವಿಡ್‌ ಪರೀಕ್ಷೆಗಾಗಿ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು. ಚಿತ್ರ: ಬಿ.ಕೆ.ಜನಾರ್ಧನ್
ಬೆಂಗಳೂರು ರೈಲು ನಿಲ್ದಾಣದಲ್ಲಿ ಬಾಲಕಿಗೆ ಕೋವಿಡ್‌ ಪರೀಕ್ಷೆಗಾಗಿ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು. ಚಿತ್ರ: ಬಿ.ಕೆ.ಜನಾರ್ಧನ್   

ಬೆಂಗಳೂರು: ರಾಜ್ಯದಲ್ಲಿ ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆಗಿಂತಲೂ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕೊರೊನಾ ವೈರಸ್‌ ಸೋಂಕು ಖಚಿತ ಪ್ರಮಾಣ ಶೇ.1.09 ಹಾಗೂ ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ.1.80 ದಾಖಲಾಗಿದೆ.

ಕೋವಿಡ್‌ ದೃಢಪಟ್ಟ 1,826 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 33 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 1,618 ಮಂದಿ ಗುಣಮುಖರಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 29.22 ಲಕ್ಷ ದಾಟಿದ್ದು, ಈ ಪೈಕಿ 28.63 ಲಕ್ಷಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ ಹಾಗೂ 36,881 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಾದ್ಯಂತ 22,851 ಪ್ರಕರಣಗಳು ಸಕ್ರಿಯವಾಗಿವೆ.

ADVERTISEMENT

ಕೇರಳದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ದಕ್ಷಿಣ ಕನ್ನಡದಲ್ಲಿ 422 ಪ್ರಕರಣಗಳು, ಬೆಂಗಳೂರಿನಲ್ಲಿ 377, ಹಾಸನದಲ್ಲಿ 175, ಉಡುಪಿಯಲ್ಲಿ 130, ಮೈಸೂರಿನಲ್ಲಿ 118 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.