ADVERTISEMENT

Covid-19 Karnataka Update: 1,857 ಹೊಸ ಪ್ರಕರಣ, 30 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಆಗಸ್ಟ್ 2021, 13:27 IST
Last Updated 12 ಆಗಸ್ಟ್ 2021, 13:27 IST
ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರೈಲಿನಲ್ಲಿ ಬರುವ ‌ಪ್ರಯಾಣಿಕರನ್ನು ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸುತ್ತಿದ್ದ ದೃಶ್ಯ ಮಂಗಳೂರಿನ ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಕಂಡು ಬಂತು –ಪ್ರಜಾವಾಣಿ ಚಿತ್ರ
ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರೈಲಿನಲ್ಲಿ ಬರುವ ‌ಪ್ರಯಾಣಿಕರನ್ನು ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸುತ್ತಿದ್ದ ದೃಶ್ಯ ಮಂಗಳೂರಿನ ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಕಂಡು ಬಂತು –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 24 ಗಂಟೆಗಳ ಅವಧಿಯಲ್ಲಿ 1,857 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 30 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,24,732ಕ್ಕೆ ಏರಿಕೆಯಾಗಿದೆ. ಆ ಪೈಕಿ 36,911 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ 28,65,067 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,728 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರಿನಲ್ಲಿ ಇಂದು 321 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಇತ್ತ ದಕ್ಷಿಣ ಕನ್ನಡ 475, ಉಡುಪಿ 191, ಹಾಸನ 123, ಮೈಸೂರು 116, ಚಿಕ್ಕಮಗಳೂರು ಜಿಲ್ಲೆಯಲ್ಲಿ 107 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.15 ರಷ್ಟಿದ್ದು, ಮರಣ ಪ್ರಮಾಣ ಶೇ.1.61 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.