ADVERTISEMENT

Covid-19 Karnataka Update: ಒಟ್ಟು ಪ್ರಕರಣಗಳ ಸಂಖ್ಯೆ 29.47 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 19:06 IST
Last Updated 29 ಆಗಸ್ಟ್ 2021, 19:06 IST
ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆಗಾಗಿ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆಗಾಗಿ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ 1,262 ಮಂದಿ ಕೊರೊನಾ ಸೋಂಕಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಈವರೆಗೆ ವರದಿಯಾದಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.47 ಲಕ್ಷ ದಾಟಿದೆ.

ಒಂದು ದಿನದಲ್ಲಿ 1.78 ಲಕ್ಷ ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.70ರಷ್ಟಿದೆ. 14 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಎರಡಂಕಿ, 10 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿವೆ. ಬೀದರ್, ಚಿಕ್ಕಬಳ್ಳಾಪುರ, ಗದಗ ಹಾಗೂ ಯಾದಗಿರಿಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 202, ಮೈಸೂರು, ಕೊಡಗಿನಲ್ಲಿ ತಲಾ 86 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 361 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ಇವೆ.

ADVERTISEMENT

ಕೋವಿಡ್ಪೀಡಿತರಲ್ಲಿ 17 ಮಂದಿ ಮೃತಪಟ್ಟಿದ್ದಾರೆ. 9 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 6, ದಕ್ಷಿಣ ಕನ್ನಡದಲ್ಲಿ 3 ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆರು ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.ಮರಣ ಪ್ರಮಾಣ ದರ ಶೇ 1.34ರಷ್ಟಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 37,278ಕ್ಕೆ ತಲುಪಿದೆ. ಸೋಂಕಿತರಲ್ಲಿ 1,384 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 28.91 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,758ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.