ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,217 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.ಈವರೆಗೆ ವರದಿಯಾದಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 29.50 ಲಕ್ಷ ಸಮೀಪಿಸಿದೆ.
1.95 ಲಕ್ಷಕ್ಕೆ ಕಳೆದ ವಾರ ಏರಿದ್ದ ಪರೀಕ್ಷೆಗಳ ಸಂಖ್ಯೆ ಇಳಿಮುಖ ಮಾಡಿದೆ. ಒಂದು ದಿನದಲ್ಲಿ 1.28 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.94ರಷ್ಟಿದೆ. 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.
ಹೊಸದಾಗಿ ಮೂರು ಡೆಲ್ಟಾ ಪ್ರಕರಣಗಳು ದೃಢಪಟ್ಟಿದ್ದು, ಈ ಪ್ರಕರಣಗಳ ಒಟ್ಟು ಸಂಖ್ಯೆ 1,092ಕ್ಕೆ ಏರಿಕೆಯಾಗಿದೆ. ಒಂದು ಕಪ್ಪಾ ಪ್ರಕರಣ ಖಚಿತಪಟ್ಟಿದ್ದು, ಈ ತಳಿಯ ವೈರಾಣು ಹೊಂದಿದವರ ಸಂಖ್ಯೆ 160ಕ್ಕೆ ತಲುಪಿದೆ.
ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 224, ಮೈಸೂರಿನಲ್ಲಿ 127 ಹಾಗೂ ಕೊಡಗಿನಲ್ಲಿ ತಲಾ 89 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 287 ಮಂದಿ ಹಾಗೂ ಉಡುಪಿಯಲ್ಲಿ 150 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100ರ ಗಡಿಯೊಳಗೆ ಇವೆ. ಕೋವಿಡ್ಪೀಡಿತರಲ್ಲಿ 25 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 10 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಸೋಂಕಿತರಲ್ಲಿ 1,198 ಮಂದಿ ಚೇತರಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.