ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 1,157 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 2,188 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಈವರೆಗೂ ರಾಜ್ಯದಲ್ಲಿ 8,25,141 ಜನ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ 95.63ರಷ್ಟಿದೆ. ರಾಜ್ಯದ 24 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಶೂನ್ಯ ಮರಣ ದಾಖಲಾಗಿದ್ದು, ಕೋವಿಡ್ ಮರಣ ಪ್ರಮಾಣ ಶೇ 1.33 ರಷ್ಟಿದೆ ಎಂದು ತಿಳಿಸಿದ್ದಾರೆ.
ಒಟ್ಟು ಕೋವಿಡ್–19 ಪ್ರಕರಣಗಳ ಸಂಖ್ಯೆ 8,62,804 ಮುಟ್ಟಿದೆ. 730 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್–19 ದೃಢಪಟ್ಟ 597 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ 6 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 64 ಪ್ರಕರಣಗಳು, ಮಂಡ್ಯದಲ್ಲಿ 56 ಪ್ರಕರಣಗಳು, ಹಾಸನದಲ್ಲಿ 52, ದಕ್ಷಿಣ ಕನ್ನಡದಲ್ಲಿ 50 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 46 ಪ್ರಕರಣಗಳು ದಾಖಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.