ರಾಮನಗರ: ವಿಧಾನ ಪರಿಷತ್ ಸದಸ್ಯರಾದ ಬೆನ್ನಲ್ಲೇ ಸಿ.ಪಿ. ಯೋಗೇಶ್ವರ್ ದೆಹಲಿಯತ್ತ ಮುಖ ಮಾಡಿದ್ದು, ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಯೋಗೇಶ್ವರ್ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದಾರೆ. ಹೀಗಾಗಿ ಈ ಬಾರಿ ಮಂತ್ರಿಗಿರಿಗಾಗಿ ಪಕ್ಷದ ಅಧ್ಯಕ್ಷರಿಗೆ ಬೇಡಿಕೆ ಸಲ್ಲಿಸಲೆಂದೇ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರ ರಾಜಕೀಯ ವೈರಿ ರಮೇಶ್ ಸಹ ಜೊತೆಗೂಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಡಿ.ಕೆ. ಸಹೋದರರ ವಿರುದ್ಧದ ಕೆಲವು ಸಾಕ್ಷ್ಯಗಳನ್ನೂ ಅವರೂ ಕೊಂಡೊಯ್ದಿದ್ದಾರೆ ಎಂದು ಸುದ್ದಿ ಹಬ್ಬಿದೆ. ಈ ಕುರಿತು ಪ್ರತಿಕ್ರಿಯೆಗೆ ಯೋಗೇಶ್ವರ್ ದೂರವಾಣಿ ಸಂಪರ್ಕಕ್ಕೆ ಲಭ್ಯ ಆಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.