ADVERTISEMENT

ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದಾಗಿ ದೇವೇಗೌಡರಿಗೆ ತಿಳಿಸಿದ್ದೆ: ಪುಟ್ಟರಾಜು

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 4:19 IST
Last Updated 29 ಜನವರಿ 2022, 4:19 IST
ಎಚ್‌.ಡಿ.ದೇವೇಗೌಡ, ಸಿ.ಎಸ್‌.ಪುಟ್ಟರಾಜು, ಸಿದ್ದರಾಮಯ್ಯ
ಎಚ್‌.ಡಿ.ದೇವೇಗೌಡ, ಸಿ.ಎಸ್‌.ಪುಟ್ಟರಾಜು, ಸಿದ್ದರಾಮಯ್ಯ   

ಮಂಡ್ಯ: ‘ನನ್ನ ರಾಜಕೀಯ ಜೀವನ ಜೆಡಿಎಸ್‌ನಲ್ಲೇ ಆರಂಭವಾಗಿದ್ದು, ಅಲ್ಲಿಯೇ ಕೊನೆಯಾಗಲಿದೆ. ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದ್ದಾರೆ.

ಸುದ್ದಿಗಾರರೊಡನೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ವಿಷಯವನ್ನು ಎಚ್‌.ಡಿ.ದೇವೇಗೌಡ ಅವರಿಗೆ ತಿಳಿಸಿದ್ದೆ. ನನ್ನ ಕ್ಷೇತ್ರದ ಡಿಂಕಾ ಮಲ್ಲಿಗೆರೆ ಗ್ರಾಮದಲ್ಲಿ ಕುರುಬ ಸಮುದಾಯ ಪ್ರಬಲವಾಗಿದೆ. ಅಲ್ಲಿ ಸಿದ್ದರಾಮೇಶ್ವರ ದೇವಾಲಯದ ಉದ್ಘಾಟನೆಗೆ ಆಹ್ವಾನಿಸಲು ತೆರಳಿದ್ದೆ’ ಎಂದರು.

‘ಅಷ್ಟಕ್ಕೇ ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ಸುದ್ದಿ ಹರಡಿದ್ದಾರೆ. 1978ರಲ್ಲಿ ಜನತಾ ಪಕ್ಷದಿಂದ ರಾಜಕಾರಣಕ್ಕೆ ಬಂದೆ. ಇಂದಿನವರೆಗೂ ಪಕ್ಷ ಬಿಡುವ ಬಗ್ಗೆ ಯೋಚಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.